Instant News. Infinite Insights
KARNATAKA NEWS
Karnataka Ranji Trophy squad: ಪಂಜಾಬ್ ವಿರುದ್ಧದ ಮುಂದಿನ ರಣಜಿ ಪಂದ್ಯಕ್ಕೆ ಕರ್ನಾಟಕ ತಂಡದಲ್ಲಿ ಮಹತ್ವದ ಬದಲಾವಣೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಯಶಸ್ವಿ ನಾಯಕನಾಗಿದ್ದ ಮಯಾಂಕ್ ಅಗರ್ವಾಲ್ ಬದಲಿಗೆ ದೇವದತ್ ಪಡಿಕ್ಕಲ್ಗೆ ನಾಯಕತ್ವ ನೀಡಲಾಗಿದೆ. ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದು, ಪ್ರಸಿದ್ಧ್ ಕೃಷ್ಣ ಆಯ್ಕೆಯಾಗಿದ್ದಾರೆ. ಕರುಣ್ ನಾಯರ್ ಮತ್ತು ಅಭಿನವ್ ಮನೋಹರ್ ತಂಡದಿಂದ ಹೊರಬಿದ್ದಿದ್ದಾರೆ. ಜನವರಿ 29 ರಂದು ಪಂಜಾಬ್ ವಿರುದ್ಧ ಮೊಹಾಲಿಯಲ್ಲಿ ಪಂದ್ಯ ನಡೆಯಲಿದೆ.